-->

ದ. ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿರುವ ಮನರೇಗಾ ಬಚಾವ್ ಸಂಗ್ರಾಮ ಪಾದಯಾತ್ರೆ  ನಾಳೆ ಮೂಲ್ಕಿಯಲ್ಲಿ ಸಮಾಪ್ತಿ

ದ. ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿರುವ ಮನರೇಗಾ ಬಚಾವ್ ಸಂಗ್ರಾಮ ಪಾದಯಾತ್ರೆ ನಾಳೆ ಮೂಲ್ಕಿಯಲ್ಲಿ ಸಮಾಪ್ತಿ



ಮಂಗಳೂರು:ಮನರೇಗಾ ಯೋಜನೆ ಗ್ರಾಮೀಣ ಕಾರ್ಮಿಕರ ಜೀವನಾಡಿಯಾಗಿದ್ದು, ಲಕ್ಷಾಂತರ ಕುಟುಂಬಗಳ ಬದುಕಿಗೆ ಆಧಾರವಾಗಿದೆ. ಈ ಯೋಜನೆಯನ್ನು ದುರ್ಬಲಗೊಳಿಸುವ ಕೇಂದ್ರ ಬಿಜೆಪಿ ನೇತೃತ್ವದ NDA ಸರಕಾರದ ಧೋರಣೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿರುವ ಮನರೇಗಾ ಬಚಾವ್ ಸಂಗ್ರಾಮ ಪಾದಯಾತ್ರೆ ನಾಳೆ (ದಿನಾಂಕ:12-02-2026) ಗುರುವಾರದಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ತಲುಪಲಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಬೆಳಿಗ್ಗೆ 9ಕ್ಕೆ ಕೂಳೂರಿನಿಂದ ಪಾದಯಾತ್ರೆ ಆರಂಭಗೊಳ್ಳಲಿದ್ದು, ಸುರತ್ಕಲ್ ತಡಂಬೈಲ್ ನಲ್ಲಿ ಮಧ್ಯಾಹ್ನದ ಊಟ ಹಾಗೂ ವಿಶ್ರಾಂತಿ ನಂತರ ಸಂಜೆ ಮುಲ್ಕಿಯಲ್ಲಿ ಸಮಾಪ್ತಿಗೊಳ್ಳಲಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ