ನಂತೂರು ಭೀಕರ ಅಪಘಾತ,ಸ್ಥಳಕ್ಕೆ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ಭೇಟಿ
Saturday, February 7, 2026
ಮಂಗಳೂರಿನ ನಂತೂರು ವೃತ್ತದ ಬಳಿ ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತ ನಡೆದ ಸ್ಥಳಕ್ಕೆ ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರು ಸಂಚಾರ ಸಹಾಯಕ ಪೊಲೀಸ್ ಆಯುಕ್ತರು, ಸಂಚಾರ ಪೊಲೀಸ್ ನಿರೀಕ್ಷಕರು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಕಿರಿಯ ಇಂಜಿನಿಯರ್ಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ನಡೆಯದಂತೆ ಸಮರ್ಪಕ ಸಂಚಾರ ಹಾಗೂ ರಸ್ತೆ ನಿರ್ವಹಣೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.