ಬಪ್ಪನಾಡು ದೇವಳದ ನೂತನ ರಥಕ್ಕೆ ದೇಣಿಗೆ
Wednesday, February 4, 2026
ಕಿನ್ನಿಗೋಳಿ: ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಮ್ಮಾಯಿ ದೇವಸ್ಥಾನದ ಧರ್ಮದರ್ಶಿ ಮೋಹನದಾಸ ಸುರತ್ಕಲ್ ಅವರು ಮೂಲ್ಕಿ ಒಂಭತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ನೂತನ ರಥದ ನಿರ್ಮಾಣಕ್ಕೆ ದೇಣಿಗೆಯಾಗಿ ರೂ 50,000/ ರೂ ವನ್ನು ನೀಡಿದರು.
ಈ ಸಂದರ್ಭದಲ್ಲಿ ದೇವಾಲಯದ ಅನುವಂಶಿಕ ಮೊಕ್ತೇಸರ ಹಾಗೂ ಸೀಮೆಯ ಅರಸರಾದ ಎಂ. ದುಗ್ಗಣ್ಣ ಸಾವಂತರು ದಾನಿಗಳನ್ನು ಶಾಲು ಹೊದೆಸಿ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಕ್ಷೇತ್ರದ ಅರ್ಚಕರಾದ ನರಸಿಂಹ ಭಟ್ ,ಶ್ರೀಮತಿ ಚೇತನಾ ಮೋಹನದಾಸ, ಕಾರ್ಯದರ್ಶಿ ಶುಭಲಕ್ಷೀ ಕಿಲ್ಪಾಡಿ ಉಪಸ್ಥಿತರಿದ್ದರು.