-->

ಯಕ್ಷ ದೇಗುಲ ತೋಕೂರು 7ನೇ ವರ್ಷದ ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ

ಯಕ್ಷ ದೇಗುಲ ತೋಕೂರು 7ನೇ ವರ್ಷದ ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ

ತೋಕೂರು: ಯಕ್ಷ ದೇಗುಲ ಹತ್ತು ಸಮಸ್ತರು 10ನೇ 
ತೋಕೂರು ವತಿಯಿಂದ 7ನೇ ವರ್ಷದ ಯಕ್ಷಗಾನ ಬಯಲಾಟದ ಅಂಗವಾಗಿ ಓಂಕಾರೇಶ್ವರೀ  ಮಂದಿರದ ಮುಂಭಾಗದಲ್ಲಿ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯವರಿಂದ  ತುಳು ಪೌರಾಣಿಕ ಯಕ್ಷಗಾನ ಪ್ರಸಂಗ ಕೋರ್ದಬ್ಬು ಬಾರಗ ಪ್ರದರ್ಶನಗೊಂಡಿತು.ಈ ಸಂದರ್ಭ ಯಕ್ಷ ದೇಗುಲದ ಗೌರವಾಧ್ಯಕ್ಷ  ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ   ಜಯಕೃಷ್ಣ ಕೋಟ್ಯಾನ್, ಸುಂಕದಕಟ್ಟೆ ಮೇಳದ ಹಿರಿಯ ಯಕ್ಷಗಾನ ಕಲಾವಿದ ರಮೇಶ್ ಕುಲಶೇಖರ ಹಾಗೂ ರಂಗಮಾಣಿಕ್ಯ ಸುಬ್ಬು ಸಾಂಟ್ಯಾರು ಅವರನ್ನು  ಸಾಧಕರ ನೆಲೆಯಲ್ಲಿ ಗೌರವಿಸಲಾಯಿತು. 
 ಯಕ್ಷ ದೇಗುಲದ ಅಧ್ಯಕ್ಷ ದಿನಕರ್ ಸಾಲ್ಯಾನ್, ಉಪಾಧ್ಯಕ್ಷ  ಸಂಪತ್ ಜೆ ಶೆಟ್ಟಿ, ಪದ್ಮರಾಜ್ ಕರ್ಕೇರ, ಪ್ರಧಾನ ಕಾರ್ಯದರ್ಶಿ  ಭಾಸ್ಕರ್ ಅಮೀನ್ ತೋಕೂರು, ಜೊತೆ ಕಾರ್ಯದರ್ಶಿ ಶ್ರೀಮತಿ ಕುಸುಮ ಹರೀಶ್ ಕೋಟ್ಯಾನ್, ಕೋಶಾಧಿಕಾರಿ ನವೀನ್ ಚಂದ್ರ ಅಮೀನ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.   ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಅಮೀನ್ ತೋಕೂರು ಕಾರ್ಯಕ್ರಮ  ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ