Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಮಹೋತ್ಸವದ ಅಂಗವಾಗಿ ಹಗಲು ರಥೋತ್ಸವ

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ  ವರ್ಷಾವಧಿ  ಮಹೋತ್ಸವದ ಅಂಗವಾಗಿ ಮಂಗಳವಾರದಂದು   ಹಗಲು ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ಮಧ್ಯಾಹ್ನ ಪಲ್ಲಪೂಜೆ  ನಡೆದ ಬಳಿಕ  ಮಹಾ ಅನ್ನಸಂತರ್ಪಣೆಯು  ನಡೆಯಿತು.

ಈ ಸಂದರ್ಭ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ನರಸಿಂಹ ಭಟ್, ಶ್ರೀಪತಿ ಉಪಾಧ್ಯಾಯ, ದೇವಸ್ಥಾನದ ಅನುವಂಶಿಕ ಮೊಕ್ತೇಸರ  ದುಗ್ಗಣ್ಣ ಸಾವಂತ ಅರಸರು,ಮಾಜೀ  ಮೊಕ್ತೇಸರ  ಡಾ ಹರಿಕೃಷ್ಣ ಪುನರೂರು, ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಪ್ರಮುಖರುಗಳು ಹಾಗೂ ಭಕ್ತರು  ಉಪಸ್ಥಿತರಿದ್ದರು.