Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ತೋಕೂರು ದೇವಳದ ಸಮಗ್ರ ಜೀರ್ಣೋದ್ದಾರಕ್ಕೆ ದೇಣಿಗೆ

ತೋಕೂರು:ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇಲ್ಲಿನ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ.), ತೋಕೂರು,ಹಳೆಯಂಗಡಿಯ   ಅಧ್ಯಕ್ಷ  ಸುರೇಶ್ ಶೆಟ್ಟಿ  ಅವರು ತಗಡು ಚಪ್ಪರದ ಬಾಬ್ತು  38,102/- ರೂಪಾಯಿಯನ್ನು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿಯವರಿಗೆ ಹಸ್ತಾಂತರಿಸಿದರು. 

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪುರುಷೋತ್ತಮ ಕೋಟ್ಯಾನ್, ಅಶೋಕ್ ಕುಂದರ್, ಸವಿತಾ ಬೆಳ್ಳಾಯರು, ಶೋಭಾ ವಿ ಅಂಚನ್ , ನಿಕಟ ಪೂರ್ವ ಸದಸ್ಯ  ಯೋಗೀಶ್ ಕೋಟ್ಯಾನ್ ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು ಉಪಸ್ಥಿತರಿದ್ದರು.