ಮುಲ್ಕಿ: ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲೋಕಕಲ್ಯಾಣಕ್ಕಾಗಿ ವಿಜೃಂಭಣೆಯ ಏಕಾಹ ಭಜನೆ
ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶನಿವಾರದಂದು ಲೋಕಕಲ್ಯಾಣಕ್ಕಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಏಕಾಹ ಭಜನೆ ಕಾರ್ಯಕ್ರಮ ನಡೆಯಿತು
ಪ್ರಾತಃಕಾಲ 6-15ಕ್ಕೆ ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು
ದೀಪ ಪ್ರಜ್ವಲನೆ ಮೂಲಕ ಏಕಾಹ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು
ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು, ಉಪಸ್ಥಿತರಿದ್ದರು