Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...





ಪದ್ಮನೂರಿನಿಂದ ಪಕ್ಷಿಕೆರೆಗೆ ಸಂಪರ್ಕಿಸುವ ರಸ್ತೆ ಹದಗೆಟ್ಟು; ಹೊಂಡಗಳಲ್ಲಿ ನೀರು ನಿಂತು ಅಪಾಯ


ಕಿನ್ನಿಗೋಳಿ:ಕಿನ್ನಿಗೋಳಿಯ ಪದ್ಮನೂರಿನಿಂದ ಹೊಸಕಾವೇರಿ ಮೂಲಕ ಪಕ್ಷಿಕೆರೆಗೆ ಸಂಪರ್ಕಿಸುವ ರಸ್ತೆಯ ಹಲವೆಡೆ ದೊಡ್ಡದಾದ ಹೊಂಡಗಳು ಉಂಟಾಗಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಹೊಂಡಗಳಲ್ಲಿ ನೀರು ನಿಂತುಕೊಳ್ಳುತ್ತಿದ್ದು, ವಾಹನ ಸವಾರರಿಗೆ ರಸ್ತೆಯ ಸ್ಥಿತಿ ತಿಳಿಯದೆ ಸಂಚರಿಸುವುದು ಅಪಾಯಕಾರಿಯಾಗಿ ಪರಿಣಮಿಸಿದೆ.

ಈ ರಸ್ತೆಯಲ್ಲಿ ಪ್ರತಿನಿತ್ಯ ದ್ವಿಚಕ್ರ ವಾಹನಗಳು, ಕಾರುಗಳು ಸೇರಿದಂತೆ ಹಲವು ವಾಹನಗಳು ಸಂಚರಿಸುತ್ತಿದ್ದು, ಹೊಂಡಗಳಿಂದ ಅಪಘಾತ ಸಂಭವಿಸುವ ಆತಂಕ ಎದುರಾಗಿದೆ. ಅಲ್ಲದೆ, ರಸ್ತೆ ಹದಗೆಟ್ಟಿರುವುದರಿಂದ ವಾಹನಗಳ ಸಂಚಾರಕ್ಕೂ ತೀವ್ರ ತೊಂದರೆಯಾಗುತ್ತಿದೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ರಸ್ತೆಯ ಹೊಂಡಗಳನ್ನು ಮುಚ್ಚಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.